
ನಟ ಕಿಚ್ಚ ಸುದೀಪ್ ಅವರು ರಾಜ್ಯ ಮತ್ತು ರಾಷ್ಟ್ರದ ವಿಷಯಗಳ ಬಗ್ಗೆ ಸದಾ ದನಿ ಎತ್ತುತ್ತಾ ಬಂದಿದ್ದಾರೆ. ಅಗತ್ಯ ಬಿದ್ದಾಗ ಪ್ರತಿಭಟಿಸಿದ್ದಾರೆ, ಒಳ್ಳೆಯ ಕಾರ್ಯಗಳನ್ನು ಮುಕ್ತವಾಗಿ ಕೊಂಡಾಡಿದ್ದಾರೆ. ಇತ್ತೀಚೆಗೆ ಪಹಲ್ಗಾಮ್ ದಾಳಿ ನಡೆದಾಗ ಗಟ್ಟಿ ದನಿಯಲ್ಲಿ ಖಂಡಿಸಿದ ಕಿಚ್ಚ, ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯನ್ನು ಮುಕ್ತವಾಗಿ ಶ್ಲಾಘಿಸಿದ್ದರು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮೋದಿಗೇ ಪತ್ರ ಬರೆದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಅವರು ಬರೆದಿರುವ ಪತ್ರದಲ್ಲಿ, ಈ ಹಿಂದೆ ಮೋದಿ ಅವರು ತಮಗೆ ಬರೆದಿದ್ದ ಪತ್ರದ ಉಲ್ಲೇಖವನ್ನೂ ಮಾಡಿದ್ದಾರೆ. “ನನ್ನ ತಾಯಿ ಸರೋಜಾ ಸಂಜೀವ್ ಅವರು ನಿಧನರಾದಾಗ ನೀವು ಬರೆದ ಪತ್ರ, ವೈಯಕ್ತಿಕ ನಷ್ಟದ ಆ ಕಠಿಣ ಸಮಯದಲ್ಲಿ ನನಗೆ ಶಕ್ತಿ ಮತ್ತು ಧೈರ್ಯವನ್ನು ತುಂಬಿತ್ತು. ಅದು ನನಗೆ ಜೀವನ ಪರ್ಯಂತ ನೆನಪಾಗಿ ಉಳಿಯಲಿದೆ. ಇಂದು ನಾನು ಈ ಪತ್ರವನ್ನು ಕೇವಲ ಒಬ್ಬ ಮಗನಾಗಿ ಬರೆಯುತ್ತಿಲ್ಲ. ಬದಲಿಗೆ ದೇಶದ ನಾಗರಿಕನಾಗಿ ಬರೆಯುತ್ತಿದ್ದೇನೆ.
ಆಪರೇಷನ್ ಸಿಂಧೂರ್ನ ವಿಜಯೋತ್ಸವಕ್ಕೆ ರಾಷ್ಟ್ರವೇ ನಮಿಸುತ್ತಿದೆ. ನಾನು ನಿಮಗೆ ಆಳವಾದ ಅಭಿಮಾನದಿಂದ ಈ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ್ ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಅದೊಂದು ದಿಟ್ಟ ಹೇಳಿಕೆಯಾಗಿತ್ತು. ಭಾರತವು ಅಲುಗಾಡುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಉದಯಿಸುತ್ತದೆ ಎಂಬ ದಿಟ್ಟ ಮತ್ತು ನಿರ್ಣಾಯಕ ಸಂದೇಶವನ್ನು ಜಗತ್ತಿಗೆ ನೀಡಿದೆ” ಎಂದು ಸುದೀಪ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಡಿಜಿಟಲ್ ಯುದ್ಧ ಶುರು! ನಿಮ್ಮ WhatsApp, Facebook ಅಪಾಯದಲ್ಲಿ!
“ನಿಮ್ಮಲ್ಲಿ, ನಾವು ಕೇವಲ ಪದಗಳಿಂದ ಮಾರ್ಗದರ್ಶನ ಮಾಡದ ನಾಯಕನನ್ನು ನೋಡುತ್ತೇವೆ, ಬದಲಿಗೆ ದೃಢವಿಶ್ವಾಸದಿಂದ ಮುನ್ನಡೆಸುವ ನಾಯಕನನ್ನು ಕಾಣುತ್ತೇವೆ. ಈ ಕಾರ್ಯಾಚರಣೆಯನ್ನು ನಡೆಸಿದ ಸ್ಪಷ್ಟತೆ ಮತ್ತು ಆತ್ಮವಿಶ್ವಾಸವು ನಮ್ಮ ನಾಗರಿಕತೆಯ ಆತ್ಮವನ್ನು ಪ್ರತಿಬಿಂಬಿಸುತ್ತದೆ. ಅದು ಯಾವಾಗಲೂ ನಿರ್ಭೀತ, ಧಾರ್ಮಿಕ ಮತ್ತು ದೃಢನಿಶ್ಚಯವನ್ನು ಹೊಂದಿದೆ. ಪ್ರತಿಯೊಬ್ಬ ಕನ್ನಡಿಗ ಮತ್ತು ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗೆ ಗಟ್ಟಿಯಾಗಿ ನಿಂತಿದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿ ಪಡೆಯುತ್ತೇವೆ” ಎಂದು ಸುದೀಪ್ ಪತ್ರದಲ್ಲಿ ಬರೆದಿದ್ದಾರೆ.
“ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಸಾಟಿಯಿಲ್ಲದ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವು ಒಗ್ಗಟ್ಟಿನಲ್ಲಿದ್ದೇವೆ, ಒಂದು ಧ್ವನಿ, ಒಂದು ರಾಷ್ಟ್ರವಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ್” ಎಂದು ಕಿಚ್ಚ ಸುದೀಪ್ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಉಡುಪಿಯ ಯುವಕನಿಗೆ ಪಾಕ್ನಿಂದ ವಾಟ್ಸಪ್ ಸಂದೇಶ!
ಕಿಚ್ಚ ಸುದೀಪ್ ಅವರ ಈ ಪತ್ರವು ರಾಷ್ಟ್ರೀಯ ವಿಷಯಗಳ ಬಗ್ಗೆ ಅವರ ಕಾಳಜಿ ಮತ್ತು ದೇಶಭಕ್ತಿಯನ್ನು ಎತ್ತಿ ತೋರಿಸುತ್ತದೆ. ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಅವರ ಬೆಂಬಲ ಮತ್ತು ಭಾರತೀಯ ಸೇನೆಯ ಶೌರ್ಯಕ್ಕೆ ಅವರ ಮೆಚ್ಚುಗೆಯನ್ನು ಈ ಪತ್ರದಲ್ಲಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಲಕ್ಷ್ಮೀ ನಿವಾಸ ಸೀರಿಯಲ್ ನಟನ ಕಳ್ಳಾಟ ಬಯಲು! ಅಕ್ರಮ ಸಂಬಂಧದ ಆರೋಪ!
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.