
ತಮಿಳು ಚಿತ್ರರಂಗದ ಜನಪ್ರಿಯ ನಟ ಮತ್ತು ಅಭಿಮಾನಿಗಳಿಂದ ‘ದಳಪತಿ’ ಎಂದು ಕರೆಯಲ್ಪಡುವ ವಿಜಯ್ ಅವರು ಇದೀಗ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ‘ತಮಿಳಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ ರಾಜಕೀಯ ಪ್ರವೇಶ ಮಾಡಿರುವ ವಿಜಯ್ ವಿರುದ್ಧ ಮೌಲ್ವಿಯೊಬ್ಬರು ಫತ್ವಾ ಹೊರಡಿಸಿದ್ದಾರೆ.
2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ವಿಜಯ್ ಅವರ ಪಕ್ಷಕ್ಕೆ ಇದು ದೊಡ್ಡ ಆಘಾತವನ್ನುಂಟು ಮಾಡುವ ಸಾಧ್ಯತೆ ಇದೆ. ಮುಸ್ಲಿಂ ಸಮುದಾಯದ ಈ ವಿರೋಧವು ವಿಜಯ್ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉತ್ತರ ಪ್ರದೇಶದ ಅಖಿಲ ಭಾರತ ಮುಸ್ಲಿಂ ಜಮಾಅತ್ನ ಮೌಲ್ವಿಯೊಬ್ಬರು ನಟ ವಿಜಯ್ ವಿರುದ್ಧ ಫತ್ವಾ ಹೊರಡಿಸಿದ್ದಾರೆ. ತಮಿಳುನಾಡಿನಲ್ಲಿ ವಿಜಯ್ ಅವರಿಗೆ ತಮ್ಮ ಸಮುದಾಯದ ಬೆಂಬಲವಿಲ್ಲ ಎಂದು ಅವರು ಆದೇಶ ನೀಡಿದ್ದಾರೆ. ಈ ಫತ್ವಾವು ವಿಜಯ್ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಆತಂಕದ ವಾತಾವರಣ!
ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಜೋಸೆಫ್ ವಿಜಯ್ ಅವರು ರಾಜಕೀಯಕ್ಕೆ ಬಂದ ನಂತರ ಇತ್ತೀಚೆಗೆ ಆಯೋಜಿಸಿದ್ದ ಇಫ್ತಾರ್ ಕೂಟವು ಈಗ ವಿವಾದದ ಕೇಂದ್ರಬಿಂದುವಾಗಿದೆ. ವಿಜಯ್ ಅವರು ಆಹ್ವಾನಿಸಿದ್ದ ಅತಿಥಿಗಳಲ್ಲಿ ಸಮಾಜಘಾತುಕ ವ್ಯಕ್ತಿಗಳಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಆ ಇಫ್ತಾರ್ ಕೂಟವು ಸಂಪೂರ್ಣವಾಗಿ ಮುಸ್ಲಿಂ ವಿರೋಧಿ ಧೋರಣೆಯನ್ನು ಹೊಂದಿತ್ತು ಎಂದು ಕೆಲವರು ಟೀಕಿಸಿದ್ದಾರೆ. ಈ ಆರೋಪಗಳು ವಿಜಯ್ ಅವರ ರಾಜಕೀಯ ನಡೆಯನ್ನು ಪ್ರಶ್ನಿಸುವಂತೆ ಮಾಡಿದೆ.
ನಟ ವಿಜಯ್ ಅವರು ತಮ್ಮ ಇಫ್ತಾರ್ ಕೂಟಕ್ಕೆ ರಾಜಕೀಯ ಲಾಭಕ್ಕಾಗಿ ಮದ್ಯವ್ಯಸನಿಗಳು ಮತ್ತು ಜೂಜುಕೋರರನ್ನು ಆಹ್ವಾನಿಸಿದ್ದರು. ಇದರಿಂದ ವಿಜಯ್ ಅವರು ಮುಸ್ಲಿಂ ಸಮುದಾಯದ ನಂಬಿಕೆಗೆ ಅರ್ಹರಲ್ಲ. ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಬೆಂಬಲವಿಲ್ಲ ಎಂದು ಫತ್ವಾ ಹೊರಡಿಸಲಾಗಿದೆ.
ಉತ್ತರ ಪ್ರದೇಶದ ಬರೇಲಿಯಲ್ಲಿರುವ ಸುನ್ನಿ ಮುಸ್ಲಿಂ ಮೌಲ್ವಿ ಮೌಲಾನಾ ಶಹಾಬುದ್ದೀನ್ ರಜ್ವಿ ಅವರು ತಮ್ಮ ಫತ್ವಾದಲ್ಲಿ ಈ ಆದೇಶವನ್ನು ನೀಡಿದ್ದಾರೆ. ಈ ಫತ್ವಾದಿಂದಾಗಿ 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷಕ್ಕೆ ಮತ್ತೊಂದು ಸವಾಲು ಎದುರಾಗಿದೆ.
ಇದನ್ನೂ ಓದಿ: ನಾನು ಬಾಂಗ್ಲಾ ಪಿಎಂ ಮೊಹ್ಮದ್ ಯೂನುಸ್ ಅಭಿಮಾನಿ! ಡಿಕೆಶಿ ಹೇಳಿಕೆ ವೈರಲ್!
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.