ನಟಿ ಕಂಗನಾ ರನೌತ್ ಅವರು ಪಹಲ್ಗಾಮ್ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಭಯೋತ್ಪಾದಕರನ್ನು ನಪುಂಸಕರು ಎಂದು ಕರೆದಿದ್ದಾರೆ

ಕಂಗನಾ ಅವರು ಭಯೋತ್ಪಾದಕರಿಗೆ ಧರ್ಮವಿದೆ ಮತ್ತು ಸಂತ್ರಸ್ತರಿಗೂ ಧರ್ಮವಿದೆ ಎಂದು ಹೇಳಿದ್ದಾರೆ, ಆದರೆ ನಿರ್ದಿಷ್ಟವಾಗಿ ಮುಸ್ಲಿಂ ಭಯೋತ್ಪಾದಕರಿಂದ ಹಿಂದೂಗಳು ಬಲಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ

ಕಂಗನಾ ಮಾತ್ರವಲ್ಲದೆ, ಬಾಲಿವುಡ್‌ನ ಶಾರುಖ್ ಖಾನ್, ರವೀನಾ ಟಂಡನ್, ಜಾವೇದ್ ಅಖ್ತರ್ ಮತ್ತು ಸ್ಯಾಂಡಲ್‌ವುಡ್‌ನ ಸುದೀಪ್, ಧ್ರುವ ಸರ್ಜಾ, ಯಶ್ ಮತ್ತು ರಾಧಿಕಾ ಪಂಡಿತ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ದಾಳಿಯನ್ನು ಖಂಡಿಸಿದ್ದಾರೆ

ಇತಿಹಾಸದಲ್ಲಿ ಪ್ರತಿ ಯುದ್ಧವೂ ಸಹ ಯುದ್ಧಭೂಮಿಯಲ್ಲೇ ನಡೆದಿದೆ. ಆದರೆ ಈ ನಪುಂಸಕರು ಅಮಾಯಕರ ಮೇಲೆ ನಿರಸ್ತ್ರರಾಗಿರುವವರ ಮೇಲೆ ದಾಳಿ ಮಾಡಿದ್ದಾರೆ

ಮುಸ್ಲಿಂ ಭಯೋತ್ಪಾದಕರಿಂದ ಹಿಂದುಗಳು ದಶಕಗಳಿಂದಲೂ ಜೀವ ಕಳೆದುಕೊಳ್ಳುತ್ತಿದ್ದಾರೆ

"ಯುದ್ಧಭೂಮಿಯ ಹೊರಗೆ ಕಾದಾಟ ಮಾಡುತ್ತಿರುವ ಈ ನಪುಂಸಕರ ಮೇಲೆ ಯುದ್ಧವಾದರೂ ಮಾಡುವುದು ಹೇಗೆ?

ಭಯೋತ್ಪಾದಕರಿಗೆ ಧರ್ಮ ಇದೆ, ಸಂತ್ರಸ್ತರಿಗೂ ಧರ್ಮ ಇದೆ ಎಂದು ಕಂಗನಾ ರನೌತ್ ಹೇಳಿದ್ದಾರೆ

30 ವರ್ಷಗಳಲ್ಲಿ ಮುಸ್ಲಿಂ ಜನಸಂಖ್ಯೆ ಶೇ 90ರಷ್ಟು ಹೆಚ್ಚಳ